ಕೆಪಿಎಸ್‍ಸಿ: ಮೂಲದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ

ಬೆಂಗಳೂರು, ಸೆಪ್ಟೆಂಬರ್ 29, (ಕರ್ನಾಟಕ ವಾರ್ತೆ): ಕರ್ನಾಟಕ ಲೋಕ ಸೇವಾ ಆಯೋಗವು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ 2017-18ನೇ ಸಾಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ – ‘ಎ’ ವೃಂದದ 24 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಅಕ್ಟೋಬರ್ 11 ರಿಂದ ಅಕ್ಟೋಬರ್ 13, 2021ರವರೆಗೆ ಮೂಲದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನವನ್ನು ಆಯೋಗದ ಕೇಂದ್ರ ಕಚೇರಿ, ಬೆಂಗಳೂರಿನಲ್ಲಿ ನಡೆಸಲು ನಿಗದಿಪಡಿಸಿದೆ.
ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸಂದರ್ಶನ ಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಮಾಹಿತಿಗಾಗಿ ಆಯೋಗದ ವೆಬ್‍ಸೈಟ್ ವಿಳಾಸ: http://kpsc.kar.nic.in/EligibilityList  ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *