ವಿವಿಧ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

ಬೆಂಗಳೂರು
ನಗರ ಜಿಲ್ಲೆ, ಸೆ.21 (ಕರ್ನಾಟಕ ವಾರ್ತೆ) : 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ
ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು, ನಾದಸ್ವರ ಮತ್ತು ಸಂಗೀತ ಕಲೆಗಳಲ್ಲಿ
ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

          ತರಬೇತಿಯು 4 ವರ್ಷಗಳ ಕಾಲ ನಡೆಯಲಿದ್ದು, ಉಚಿತ
ಊಟ , ವಸತಿ , ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ
ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ , ಬೆಂಗಳೂರು ನಗರ ಜಿಲ್ಲೆಯಿಂದ ಪಡೆದು, ಭರ್ತಿ
ಮಾಡಿ ದಿನಾಂಕ:16/10/2021 ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ , ಬೆಂಗಳೂರು ನಗರ ಜಿಲ್ಲೆಗೆ
ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್‌
www.backwardclasses.kar.nic.in ಗೆ ಭೇಟಿ ನೀಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ
ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ನೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *