ಬೆಂಗಳೂರು ಉತ್ತರ ವಿವಿ ಘಟಿಕೋತ್ಸವಕ್ಕಾಗಿ ಕೋಲಾರಕ್ಕೆ ಆಗಮಿಸಿದ ರಾಜ್ಯಪಾಲರು

ನವೆಂಬರ್ 27, ಕೋಲಾರ :  ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕಾಗಿ ಇಂದು ಕೋಲಾರಕ್ಕೆ ಆಗಮಿಸಿದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಕೋಲಾರದ ಜಿಲ್ಲಾಧಿಕಾರಿಗಳಾದ ಡಾ. ಆರ್.  ಸೇಲ್ವಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕ ಕಿಶೋರ್ ಬಾಬು ಅವರು ಸ್ವಾಗತ ಕೋರಿದರು.

ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ನೇರವಾಗಿ ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಆವರಣಕ್ಕೆ ಆಗಮಿಸಿದ  ರಾಜ್ಯಪಾಲರಿಗೆ ಜಿಲ್ಲಾಡಳಿತ ವತಿಯಿಂದ ಗೌರವ ರಕ್ಷೆ ನೀಡಲಾಯಿತು.

ನಂತರ  ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕುಮುದ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು .

ಈ ಸಂದರ್ಭದಲ್ಲಿ ಕುಲ ಸಚಿವರಾದ ಡಾ ವೆಂಕಟೇಶ್ ಮೂರ್ತಿ , ಸಿಂಡಿಕೇಟ್ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *