ಕನ್ನಡ ಪುಸ್ತಕಗಳ ಪ್ರದರ್ಶನ
ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2019ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಏಕಗವಾಕ್ಷಿ ಯೋಜನೆಯಡಿಯಲ್ಲಿ ಮತ್ತು 2021ರಲ್ಲಿ ಪ್ರಥಮ ಮುದ್ರಣಗೊಂಡ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯ ಮುಂದೆ ಆಯ್ಕೆಗಾಗಿ ಮಂಡಿಸಲಾಗಿತ್ತು. ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಮತ್ತು ಆಯ್ಕೆಯಾಗದ ಕನ್ನಡ ಪುಸ್ತಕಗಳ ಪ್ರದರ್ಶನವನ್ನು ದಿನಾಂಕ: 13-12-2021 ರಿಂದ ದಿ: 15-12-2021 ರವರಗೆ “ಗ್ರಂಥಾಂಗಣ”, ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಹಂಪಿನಗರ ಬೆಂಗಳೂರಿನಲ್ಲಿ ಏರ್ಪಡಿಸಲಾಗುವುದು.