ವಿವೇಕ ಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ವಿವೇಕ ಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ..

ವಿವೇಕ ಚೇತನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತಿಯಲ್ಲಿ ಇಂದು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಪ್ರಿಯಾ ಕೃಷ್ಣರವರ ಉಪಸ್ಥಿತಿಯಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

 ಇದೇ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ರವಿದಾಸ್ ಬಿಂದಿಗನವಿಲೆ ಮತ್ತು ಕೃಷ್ಣಮೂರ್ತಿ ರವರು  ಮಲ್ಲಿಕಾರ್ಜುನ ರವರು ಉಮೇಶ್ ರವರು ಹಾಗೂ ನಾಗರಾಜು ರವರು ಪ್ರಿಯಕೃಷ್ಣ ರವರಿಗೆ ಸನ್ಮಾನಿಸಿ ನೆನಪಿನ ಕಾಣಿಕೆಯಾಗಿ ವಿವೇಕಾನಂದರ ಮೂರ್ತಿಯನ್ನು ನೀಡಿ ಗೌರವಿಸಲಾಯಿತು.

ನೂತನ ವರ್ಷದ ಸಮಸ್ತ ಜನತೆಗೆ ಶುಭಕೋರಿದರು ಈ ಸಂದರ್ಭದಲ್ಲಿ ರವಿದಾಸ್ ರವರು ಸುದ್ದಿಗಾರರೊಂದಿಗೆ ಮಾತನಾಡಿ ಸಮಸ್ತ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದರು.

Leave a Reply

Your email address will not be published. Required fields are marked *