“ಅಧಿಕಮಾಸ ಪ್ರಯುಕ್ತ ಶ್ರೀ ದುರ್ಗಾಪೂಜೆ ಶ್ರೀ ಗುರುರಾಯರ ಸನ್ನಿಧಿಯಲ್ಲಿ”

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದಿಂದ್ರ ಆಚಾರ್ಯರ ಉಪಸ್ಥಿತಿಯಲ್ಲಿ ಹಾಗೂ ವಿದ್ವಾನ್ ಅಗ್ನಿಹೋತ್ರಿ ವೇಣುಗೋಪಾಲಾಚಾರ್ ಮತ್ತು ವೃಂದದವರ ಪೌರೋಹಿತ್ಯದಲ್ಲಿ ಶ್ರೀ ದುರ್ಗಾದೇವಿ ಪೂಜೆಯ ಕಾರ್ಯಕ್ರಮವು ವಿಶೇಷವಾಗಿ ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ರಂಗೋಲಿಯಲ್ಲಿ ಅಲಂಕೃತಗೊಂಡ 1008 ದೀಪಗಳೊಂದಿಗೆ ವಿಶೇಷವಾಗಿ ಪುಷ್ಪಾರ್ಚನೆ ಹಾಗೂ ಶ್ರೀ ಹರಿ ಭಜನೆಯೊಂದಿಗೆ ಕುಂಕುಮಾರ್ಚನೆ ನೆರವೇರಿತು. ಈ ಸಂದರ್ಭದಲ್ಲಿ ಶ್ರೀಮಠದ ಸಿಬ್ಬಂದಿಗಳು ಹಾಗೂ ನೂರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ಶ್ರೀ ದುರ್ಗಾದೇವಿಯ ಅನುಗ್ರಹಕ್ಕೆ ಪಾತ್ರರಾದರು.

Leave a Reply

Your email address will not be published. Required fields are marked *